ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜೂ 12. ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಮಂಗಳೂರು ತಾಲೂಕು ಯಯ್ಯಾಡಿ ಗ್ರಾಮದ ಕೊಂಚಾಡಿ ಸುರೇಶ್ ಚೌಟ ರವರ ಪುತ್ರಿ ಪ್ರೀತಿ ಶೆಟ್ಟಿ(37) ಎಂದು ಗುರುತಿಸಲಾಗಿದೆ. ಪ್ರೀತಿ‌ ಶೆಟ್ಟಿಯವರು ವಿವಾಹಿತರಾಗಿದ್ದು, ತನ್ನ ಮಗುವನ್ನು ಕಳೆದುಕೊಂಡ ಹಿನ್ನೆಲೆ ಮಾನಸಿಕವಾಗಿ ನೊಂದಿದ್ದ ಇವರು ಜೂ. 09 ರಂದು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿರುವ ಮನೆಯಲ್ಲಿ ಯಾವುದೋ‌ ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು‌ ಮನೆಯವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಸಿದ್ದರಾದರೂ,‌ ಚಿಕಿತ್ಸೆಗೆ ಸ್ಪಂಧಿಸದೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group