ಚರ್ಮಗಂಟು ರೋಗದ ವಿರುದ್ದ ಉಚಿತ ಲಸಿಕೆ ➤ ಸದುಪಯೋಗ ಪಡೆಯುವಂತೆ ಪಶುವೈದ್ಯಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 12. ಜಾನುವಾರುಗಳಿಗೆ ಚರ್ಮಗಂಟು ರೋಗ ವಿರುದ್ದ ಉಚಿತ ಲಸಿಕಾ ಕಾರ್ಯಕ್ರಮವು ಜೂ. 11ರಿಂದ 30ರ ತನಕ ನಡೆಯಲಿದೆ.


ಈ ಕಾರ್ಯಕ್ರಮವನ್ನು ಪಶುಸಂಗೋಪನಾ ಇಲಾಖೆ ಮತ್ತು ಕೆಎಂಎಫ್ ಜಂಟಿಯಾಗಿ ಹಮ್ಮಿಕೊಂಡಿದ್ದು, ತಾಲೂಕಿನ ಎಲ್ಲಾ ಹೈನುಗಾರರು ತಮ್ಮ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪುತ್ತೂರು ಪಶುವೈದ್ಯಾಧಿಕಾರಿ ಡಾ.ಪ್ರಸನ್ನ ಹೆಬ್ಬಾರ್ ಅವರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group