ಮಡಂತ್ಯಾರು: ಅಪಘಾತದ ಗಾಯಾಳು ‌ತಾಯಿ-ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.20. ಲಾರಿ ಹಾಗೂ ಕಾರು ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ನಾಲ್ವರ ಪೈಕಿ ಮಗು ಸಹಿತ ಇಬ್ಬರು ಮೃತಪಟ್ಟ ಘಟನೆ‌ ಶನಿವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಮಂಗಳೂರಿನ ನೆಲ್ಲಿಗುಡ್ಡೆ ನಿವಾಸಿಗಳಾದ ಅರ್ಚನಾ ಹಾಗೂ ಐದು ತಿಂಗಳ ಮಗು ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಅರ್ಚನಾ ಪತಿ ಜಗದೀಶ್ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿನ ಆಶೀರ್ವಾದ್ ಸಭಾಂಗಣದ ಎದುರುಗಡೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಲ್ಲಿ ಕಾರಿನಲ್ಲಿದ್ದ ಮಂಗಳೂರು ಮೂಲದ ಸಣ್ಣ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

error: Content is protected !!

Join the Group

Join WhatsApp Group