(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ 1989) ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿಯ ಜಿಲ್ಲಾ ಮಟ್ಟದ ಸಮಿತಿ ಸಭೆ ಜೂ.17ರಂದು ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಸಭೆ ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





