ನದಿಗೆ ಈಜಲು ಇಳಿದಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 19. ತುಂಗಾ ನದಿಗೆಈಜಲು ತೆರೆಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದಲ್ಲಿ ನಡೆದಿದೆ.

ಮೃತ ಪನ್ಯಾಸಕರನ್ನು ಪುನೀತ್ (38 ) ಮತ್ತು ಬಾಲಾಜಿ (36 ) ಎಂದು ಗುರುತಿಸಲಾಗಿದೆ. ಉಪನ್ಯಾಸಕರಿಬ್ಬರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದು, ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಇವರು, ಈಜಾಡಲೆಂದು ತುಂಗಾ ನದಿಗೆ ಇಳಿದಿದ್ದರು. ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top