ಉಪ್ಪಿನಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಬಿಳಿಯೂರು ಗ್ರಾಮದ ಬಿಳಿಯೂರು ಕ್ರಾಸ್ ನ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತನನ್ನು ಮಹಮ್ಮದ್ ಸರ್ಫರಾಜ್ (26) ಎಂದು ಗುರುತಿಸಲಾಗಿದೆ‌. ಜೂ. 19ರಂದು ಉಪ್ಪಿನಂಗಡಿ ಪೊಲೀಸರು ರೌಂಡ್ಸ್‌ನಲ್ಲಿದ್ದ ಸಂದರ್ಭ ಬಿಳಿಯೂರು ಕ್ರಾಸ್ ಬಸ್ ನಿಲ್ದಾಣದ ಬಳಿ ಸರ್ಫರಾಜ್ ಎಂಬಾತ, ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಆತ ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದ. ಬಳಿಕ ಆತನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಕಲಂ: 27 (ಬಿ) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group