ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್    

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ಮಹಿಳೆ ಒಬ್ಬರು  ಬಸ್ ಅಪಘಾತದಿಂದ ಪವಾಡ ದೃಶ್ಯ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ  ನಡೆದಿದೆ.

ಮಂಗಳೂರಿನಿಂದ ಮುಡಿಪು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆಯೊಬ್ಬರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೇ ರಸ್ತೆ ದಾಟಿದ ವೇಳೆ ಎದುರಿನಿಂದ ಬಸ್ ಬಂದಿದ್ದು, ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಸದ್ಯ ವಿಡಿಯೋ ವೈರಲ್ ಆಗಿದೆ.

 

error: Content is protected !!

Join the Group

Join WhatsApp Group