ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 21. ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ.

ಮೃತ ಯುವಕನನ್ನು ಓಡೀಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ಹುಟ್ಟುಹಬ್ಬವಾಗಿದ್ದರಿಂದ ಈತ ದು ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                    

error: Content is protected !!
Scroll to Top