ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ಸೈಬರ್ ಘಟಕ ಸ್ಥಾಪನೆ  ➤ ಡಾ.ಜಿ ಪರಮೇಶ್ವರ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.  21.  ಸುಳ್ಳು ಸುದ್ದಿ ಹಾವಳಿ ಕಡಿವಾಣಕ್ಕೆ ರಾಜ್ಯದ ಎಲ್ಲ ಠಾಣೆಗಳಲ್ಲಿ ಪ್ರತ್ಯೇಕ ಸೈಬರ್ ಘಟಕ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ಸುಳ್ಳು ಸುದ್ದಿ ತಡೆಯುವ ಉದ್ದೇಶದಿಂದ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಜತೆ ಸಭೆ ಕರೆಯಲಾಗುತ್ತಿದೆ. ಯಾರು ಫೇಕ್ ಸುದ್ದಿ ಹಬ್ಬಿಸುತ್ತಿದ್ದಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಯಾವುದೇ ಪಕ್ಷ ಇರಲಿ ಅಥವಾ ಸಂಘಟನೆ ಇರಲಿ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವುದು ಎಂದಿದ್ದಾರೆ.

 

error: Content is protected !!

Join the Group

Join WhatsApp Group