ಬೆಳ್ತಂಗಡಿ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 22.  ನೆರಿಯದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಎಂದು ಗುರುತಿಸಲಾಗಿದೆ. ಇವರು ಜೂ. 18 ರಂದು ಆದಿತ್ಯವಾರ ರಾತ್ರಿ ಊಟದ ಬಳಿಕ ಒಂದು ಕೋಣೆಯಲ್ಲಿ ಅದಿರಾ, ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ. ಆದರೆ ಜೂನ್ 19 ಸೋಮವಾರದಂದು ಬೆಳಗ್ಗೆ 8 ಗಂಟೆಗೆ ಎದ್ದು ನೋಡುವಾಗ ಆದಿರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಅವರು ಬಂದು ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಯುವತಿ ಮೃತಪಟ್ಟಿರುವುದಾಗಿ ಧೃಡಪಡಿಸಿದ್ದಾರೆ. ಈ ಬಗ್ಗೆ ಯುವತಿಯ ತಂದೆ ದಾಸ್ ಅವರು ಯಾವುದೋ ಕಾರಣಕ್ಕಾಗಿ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಯುವತಿಯ ಮೊಬೈಲ್ ನ್ನು ಪರಿಶೀಲನೆ ನಡೆಸುತಿದ್ದಾರೆ.

Also Read  ಕಡಬ: ದಂಪತಿಯ ಮೇಲೆ ದಾಳಿ‌ ಮಾಡಿ ಮರದ ಮೇಲೇರಿದ ಚಿರತೆ ? ಚಿರತೆಯ ಬಂಧನಕ್ಕೆ ಕಾರ್ಯಾಚರಣೆ ಆರಂಭ

error: Content is protected !!
Scroll to Top