ಉಪ್ಪಿನಂಗಡಿ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 23. ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯ ಸಮೀಪ ನಡೆದಿದೆ.

ಮೃತ ವ್ಯಕ್ತಿಯನ್ನು ಇಳಂತಿಲ ಗ್ರಾಮದ ಬನ್ನೆಂಗಳ ನಿವಾಸಿ, ಸೆಲ್ವದಾರ್ ಫೆರ್ನಾಂಡೀಸ್ (63) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ನಿತಿನ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವ್ಯಕ್ತಿ ಯಾವುದೋ ಕಾರ್ಯ ನಿಮಿತ್ತ ಉಪ್ಪಿನಂಗಡಿಯ ಎಚ್.ಎಂ ಹಾಲ್ ಬಳಿ ತನ್ನ ಓಮ್ನಿ ಕಾರನ್ನು ನಿಲ್ಲಿಸಿ ರಸ್ತೆಯ ಇನ್ನೊಂದು ಪಾರ್ಶ್ವಕ್ಕೆ ಹೋಗುವ ಸಲುವಾಗಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಂಡ್, ವಾದ್ಯಗಳ ಮೂಲಕ ಸ್ವಾಗತ

error: Content is protected !!
Scroll to Top