ಉಪ್ಪಿನಂಗಡಿ: ಬಸ್ ನಿಂದ ಬಿದ್ದು ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 23. ಬಸ್ಸಿನಿಂದ ಬಿದ್ದು ಮಹಿಳೆಯೋರ್ವರು ಗಾಯಗೊಂಡ ಘಟನೆ ಇಲ್ಲಿನ ಸಮೀಪದ ಉರುವಾಲು ಗ್ರಾಮದ ಮಚ್ಚೆ ಎಂಬಲ್ಲಿ ನಡೆದಿದೆ.


ಗಾಯಗೊಂಡ ಮಹಿಳೆಯನ್ನು ಉರುವಾಲು ಪದವು ನಿವಾಸಿ ಮುಸ್ತಫಾ ಎಂಬವರ ಪತ್ನಿ ಹಸೀನಾ (24) ಎಂದು ಗುರುತಿಸಲಾಗಿದೆ. ಇವರು ಬಸ್ಸಿನಿಂದ ಇಳಿಯುತ್ತಿದ್ದಂತೆಯೇ ಬಸ್ಸು ಮುಂದಕ್ಕೆ ಚಲಾಯಿಸಿದ್ದರಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತಿದ್ದಾರೆ.

Also Read  ಕಾಂಗ್ರೆಸ್ ಮುಕ್ತ ಭಾರತಕ್ಕೆ ಕರ್ನಾಟಕ ಮತ್ತೊಂದು ವೇದಿಕೆಯಾಗಲಿದೆ ► ಕೇರಳ ಬಿಜೆಪಿ ಕಾರ್ಯದರ್ಶಿ ಸುರೇಂದ್ರನ್

error: Content is protected !!
Scroll to Top