ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ನಾಯಿಯೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಢಿಕ್ಕಿ ಹೊಡೆದು, ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಎಂಬಲ್ಲಿ ಇಂದು ನಡೆದಿದೆ.

 


ಮೃತರನ್ನು ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಡ್ಡದಾಟಿದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್ ನಾಯಿಗೆ ಢಿಕ್ಕಿ ಹೊಡೆದಿದ್ದು, ಸವಾರ ನರಸಿಂಹರವರ ತಲೆ ಡಿವೈಡರ್ ಗೆ ಬಡಿದು ಗಂಭೀರ ಗಾಯಗೊಂಡಿದ್ದರು. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು

error: Content is protected !!
Scroll to Top