ಅಕ್ಕಿ ಪೂರೈಕೆಗೆ ನಿರಾಕರಿಸಿದ ಕೇಂದ್ರ ➤ ಕೆ.ಹೆಚ್.ಮುನಿಯಪ್ಪ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 24. ಹೆಚ್ಚುವರಿ ಅಕ್ಕಿಯನ್ನು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಪಿಯೂಶ್‌ ಗೋಯಾಲ್‌ ನೇರವಾಗಿ ಹೇಳಿದ್ದಾರೆ ಎಂದು ಕೆ.ಹೆಚ್‌ ಮುನಿಯಪ್ಪ ಅವರು ತಿಳಿಸಿದ್ದಾರೆ.

ಕೇಂದ್ರ ಸಚಿವ ಪಿಯೂಶ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅನ್ನಭಾಗ್ಯ ಯೋಜನೆ ಜಾರಿ ಮಾಡಲು ಅಕ್ಕಿಗಾಗಿ ಕೇಂದ್ರಕ್ಕೆ ಮನವಿ ಮಾಡಿದಾಗ, ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಸಾಧ್ಯವಿಲ್ಲ, ಹಣ ಕೊಡುತ್ತೇವೆ ಎಂದರೂ ಅಕ್ಕಿ ಪೂರೈಸಲು ಕೇಂದ್ರ ನಿರಾಕರಿಸಿದೆ. ಎಷ್ಟೇ ಕಷ್ಟ ಆದರೂ ನೀಡಿರುವ ಭರವಸೆಯಂತೆ ರಾಜ್ಯದ ಜನರಿಗೆ ಅಕ್ಕಿ ಕೊಟ್ಟೇ ತೀರುತ್ತೇವೆ ಎಂದು ತಿಳಿಸಿದ್ದಾರೆ.

Also Read  ನೇರ ನಗದು ವರ್ಗಾವಣೆ- ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಜಿಲ್ಲಾಧಿಕಾರಿ ಸೂಚನೆ

error: Content is protected !!
Scroll to Top