ಬೈಕ್ ಹಾಗೂ ಕಾರು ಅಪಘಾತ ➤ ಮಹಿಳೆ ಗಂಭೀರ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು. 03. ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಕನ್ಯಾಡಿಯಲ್ಲಿ ನಡೆದಿದೆ.

ಗಾಯಗೊಂಡವರನ್ನು ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಎಂಬವರ ಪತ್ನಿ ಶ್ರೀರಕ್ಷಾಕಿಣಿ ಎಂದು ಗುರುತಿಸಲಾಗಿದೆ. ರಕ್ಷಾಕಿಣಿಯವರು ತನ್ನ ತಾಯಿ ಮನೆಗೆ ತೆರಳಿದ್ದು, ಅಲ್ಲಿಂದ ಹಿಂದಿರುಗುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಹಾಗೂ ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್‌ ಇಬ್ಭಾಗವಾಗಿ ಸಂಪೂರ್ಣ ಜಖಂಗೊಂಡಿದ್ದು, ಸವಾರೆ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group