ವಿಧಾನಸಭಾ ಅಧಿವೇಶನ ಜು. 21ರವರೆಗೆ ವಿಸ್ತರಣೆ ➤ ಸ್ಪೀಕರ್ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಹದಿನಾರನೇ ವಿಧಾನ ಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ಇಂದು ವಿಧಾನಸಭೆಯ ಕಲಾಪದ ಮಧ್ಯೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಜುಲೈ 05 ರಂದು ಈಗಾಗಲೇ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 06ರಂದು ಬೆಳಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ.

ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವರೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ ಎಂದು ತಿಳಿಸಿದರು.

Also Read  ಭೀಕರ ಅಪಘಾತ! ➤ಓರ್ವ ಮೃತ್ಯು, ಮೂವರು ಗಂಭೀರ
error: Content is protected !!
Scroll to Top