‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ತೀವ್ರವಾದ ಬರಗಾಲದಿಂದಾಗಿ ಬಿತ್ತನೆ ಬೀಜಗಳು ಹಾಳಾಗಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ರೈತರ ಪರವಾಗಿ ಸರಕಾರ ತಕ್ಷಣವೇ ಪರಿಹಾರ ನೀಡಬೇಕು ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಎಪಿಎಂಸಿ ಕಾಯ್ದೆಯಡಿ ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಿತ್ತು. ಆದರೆ, ಹಿಂದಿನ ಎಪಿಎಂಸಿ ಕಾಯ್ದೆಯನ್ನು ಕಾಂಗ್ರೆಸ್ ಸರಕಾರ ತಿದ್ದುಪಡಿ ಮಾಡಿದ್ದು, ರೈತ ವಿರೋಧಿ ರಾಜ್ಯ ಸರಕಾರವನ್ನು ವಿರೋಧಿಸುತ್ತಿದ್ದೇವೆ ಎಂದರು.

 

error: Content is protected !!

Join the Group

Join WhatsApp Group