ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 19. ಬೀಚ್ ನಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದ ಗದಗ ಮೂಲದ ಯುವಕ ಪೀರ್ ಸಾಬ್ ನ ಮೃತದೇಹ ಕಂಚುಗೋಡಯ ಎಂಬಲ್ಲಿ ಪತ್ತೆಯಾಗಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಿವಾಸಿಯಾಗಿರುವ ಪೀರ್ ಸಾಬ್(21), 2 ತಿಂಗಳ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದು ಕಾಪು ತಾಲ್ಲೂಕಿನ ಮುದರಂಗಡಿಯಲ್ಲಿ ವಾಸವಾಗಿದ್ದನು. ಮಂಗಳವಾರ ಸಿರಾಜ್ ಎಂಬವರ ಜೊತೆ ಲಾರಿಯಲ್ಲಿ ಪೀರ್ ಸಾಬ್ ಹಾಗೂ ಸ್ನೇಹಿತ ಸಿದ್ಧಪ್ಪ ಊರಿಗೆ ಹೊರಟಿದ್ದರು.

ಮಧ್ಯಾಹ್ನ ಸುಮಾರು 2.30ರ ಹೊತ್ತಿಗೆ ಬೀಚಿನಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಸಮುದ್ರದಲ್ಲಿ ಈಜಲು ನೀರಿಗಿಳಿದ ಪೀರ್ ಸಾಬ್, ಅಲೆಗೆ ಕೊಚ್ಚಿ ಹೋಗಿದ್ದರು. ಸ್ಥಳೀಯ ಆಂಬುಲೆನ್ಸ್ ಡ್ರೈವರ್ ಸಮಾಜ ಸೇವಕ ಇಬ್ರಾಹಿಂ ಗಂಗೊಳ್ಳಿ ಹಾಗೂ ತಂಡ, ಜೀವ ರಕ್ಷಕ ಈಜು ತಜ್ಞ ದಿನೇಶ್ ಖಾರ್ವಿ ಹಾಗೂ ತಂಡ ಮತ್ತು ಅಗ್ನಿಶಾಮಕ ದಳ ಮತ್ತು ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು, ಹಾಗೂ ಗಂಗೊಳ್ಳಿ ಪೊಲೀಸರು ಶೋಧ ನಡೆಸಿದ್ದರು. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಖ್ಯಾತ ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ಒಲಿಂಡಾ ಪಿರೇರಾ ಇನ್ನಿಲ್ಲ➤ ಜೂನ್ 1 ರಂದು ಅಂತಿಮ ಸಂಸ್ಕಾರ

error: Content is protected !!
Scroll to Top