ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 25. ಎಸ್‌ಸಿ ಮೀಸಲಾತಿ ಪಟ್ಟಿಯಿಂದ ಲಂಬಾಣಿ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿದಂತೆ ರಾಜ್ಯ ಸರ್ಕಾರದ ವಿರುದ್ದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ರಾಯಚೂರು ಮೂಲದ ಮಹೇಂದ್ರ ಕುಮಾರ್ ನೇತೃತ್ವದಲ್ಲಿ ನಾಲ್ವರು ಅರ್ಜಿದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ಪೀಠವು, ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುವಂತೆ ಮೌಖಿಕ ಸೂಚನೆ ನೀಡಿದೆ. ವಾದ ಆಲಿಸಿದ ಪೀಠ, ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾಗಿರುವ ಹಿನ್ನಲೆ ಈ ಬಗ್ಗೆ ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ ಎಂದು ಮೌಖಿಕ ಆದೇಶ ನೀಡಿರುವುದಾಗಿ ವರದಿಯಾಗಿದೆ.

Also Read  ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ

error: Content is protected !!
Scroll to Top