ನೇತ್ರಾವತಿ- ಕುಮಾರಧಾರ ನದಿ ನೀರಿನ ಮಟ್ಟ ಇಳಿಕೆ – ತಹಶೀಲ್ದಾರ್ ಭೇಟಿ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು.26. ನೇತ್ರಾವತಿ- ಕುಮಾರಧಾರ ನದಿ ನೀರಿನ ಮಟ್ಟವು ಇಳಿಕೆಯಾಗತೊಡಗಿದ್ದು, ಇಲ್ಲಿನ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಗಿಳಿಯುವ 38  ಮೆಟ್ಟಿಲುಗಳಲ್ಲಿ 11 ಮೆಟ್ಟಿಲುಗಳು ಕಾಣಿಸಿಕೊಂಡಿದೆ ಎನ್ನಲಾಗಿದೆ.

ನಿನ್ನೆ 3 ಮೆಟ್ಟಿಲುಗಳಷ್ಟೇ ಕಾಣಿಸಿಕೊಂಡಿದ್ದವು. ಪುತ್ತೂರು ತಹಶೀಲ್ದಾರ್ ಶಿವಶಂಕರ್ ದೇವಾಲಯದ ಬಳಿ ಆಗಮಿಸಿ ನದಿಗಳ ವೀಕ್ಷಣೆ ನಡೆಸಿದರು.

error: Content is protected !!

Join the Group

Join WhatsApp Group