ಪಡಿತರ ಚೀಟಿಯಿಂದ ಮೃತರ ಹೆಸರನ್ನು ತೆಗೆಯಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ, ಅವರ ಹೆಸರು ಪಡಿತರದಲ್ಲಿ ತೆಗೆದು ಹಾಕಿರುವುದಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಉಳಿಸಿರುವುದು ಅಕ್ರಮವಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸುವಂತೆ ಸೂಚಿಸಲಾಗಿದೆ.


ಮೃತರ ಹೆಸರನ್ನು ಚೀಟಿಯಿಂದ ತೆಗೆಯದೇ ಇರುವುದು ಅಪರಾಧ. ಅಂತಹವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Also Read  ಜುಲೈ.31ಕ್ಕೆ CBSE 12ನೇ ತರಗತಿ ಫಲಿತಾಂಶ!

error: Content is protected !!
Scroll to Top