ಯುವಕ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 01. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಹನ್ಸೀಫ್ ಅವರ ತಾಯಿ ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೇ ಇದ್ದು, ಸಂಜೆ ವೇಳೆ ಅರಂತೋಡಿನ ತನ್ನ ಅಜ್ಜಿ ಮನೆಗೆ ಹೋಗಿ ಮಾತನಾಡಿ ಪುನಃ ಮನೆಗೆ ಮರಳಿದ್ದ ಎನ್ನಲಾಗಿದೆ. ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು, ಬಳಿಕ ತಾಯಿ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ. ಬಳಿಕ ತಾಯಿ, ಅರಂತೋಡಿನ ಅಜ್ಜಿ ಮನೆಗೆ ಫೋನ್ ಮಾಡಿ ಹನ್ಸೀಫ್ ಫೋನ್ ರಿಸೀವ್ ಮಾಡುತ್ತಿಲ್ಲ ಎಂದು ಹೇಳಿದ್ದರು. ಆತನ ಮಾವ ಬಿಳಿಯಾರಿಗೆ ಬಂದು ನೋಡಿದಾಗ ಈತ ಫ್ಯಾನಿಗೆ ನೇಣು ಹಾಕಿರುವುದು ಕಂಡು ಬಂದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!

Join the Group

Join WhatsApp Group