ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಮರದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.07. ಮರದ ಕೊಂಬೆ ಕಡಿಯಲು ಹೋಗಿದ್ದ ವ್ಯಕ್ತಿ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.


ಮೃತರನ್ನು ಲೋಕಪ್ಪ ಗೌಡ (56) ಎಂದು ಗುರುತಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಮರದ ಮೇಲೆಯೇ ಪ್ರಾಣ ಬಿಟ್ಟಿದ್ದು, ವಿದ್ಯುತ್ ತಂತಿಗೆ ಮರದ ಕೊಂಬೆಗಳು ತಗಲುತ್ತಿದೆ ಎಂದು ಮರ ಕಡಿಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also Read  ಅನಗತ್ಯವಾಗಿ ಜನರನ್ನು ಜೈಲಿಗೆ ಕಳಿಸುವ ನ್ಯಾಯಾಧೀಶರಿಗೆ ತರಬೇತಿ ಅನಿವಾರ್ಯ     ➤ ಸುಪ್ರೀಂ ಕೋರ್ಟ್  

error: Content is protected !!
Scroll to Top