ಖ್ಯಾತ ಚಿತ್ರ ನಟಿ ಮಾಲಾಶ್ರೀ ಆನೆಗುಡ್ಡೆ ದೇವಳಕ್ಕೆ ಭೇಟಿ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.12. ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಹಾಗೂ ಪುತ್ರಿ ಶ್ರೀ ದೇವರ ದರ್ಶನ ಪಡೆದರು ಎಂದು ವರದಿ ತಿಳಿಸಿದೆ.

ಶ್ರೀ ದೇವಸ್ಥಾನದ ವತಿಯಿಂದ ಅವರನ್ನು ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಅರ್ಚಕ ಹಾಗೂ ಮಾಜಿ ಮೊಕ್ತೇಸರರಾದ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ಶ್ರೀಶ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು ಎನ್ನಲಾಗಿದೆ.

 

Scroll to Top