ಕೌಕ್ರಾಡಿ: ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.05. ಅನಾರೋಗ್ಯದಿಂದ ಬಳಲುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ಕೌಕ್ರಾಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೌಕ್ರಾಡಿ ಗ್ರಾಮದ ಕೊಕ್ಕಡ ಕಾಪಿನ ಬಾಗಿಲು ನಿವಾಸಿ ದಿ| ದುಗ್ಗಣ್ಣ ಗೌಡ ಎಂಬವರ ಪುತ್ರ ನೇಮಣ್ಣ ಗೌಡ (56) ಎಂದು ಗುರುತಿಸಲಾಗಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಇವರು ತನ್ನ ಅನಾರೋಗ್ಯ ಪೀಡಿತ ತಾಯಿಯೊಂದಿಗೆ ವಾಸವಾಗಿದ್ದರು. ಅವಿವಾಹಿತರಾಗಿದ್ದ ಇವರು ಸೋಮವಾರ ಸಂಜೆ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Also Read  ಹುತಾತ್ಮ ಸೈನಿಕರ ಕುಟುಂಬದೊಂದಿಗೆ ಸರ್ಕಾರ ಇದೆ ➤ ಮುಖ್ಯಮಂತ್ರಿ BSY

error: Content is protected !!
Scroll to Top