ಕೌಕ್ರಾಡಿ: ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.05. ಅನಾರೋಗ್ಯದಿಂದ ಬಳಲುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ಕೌಕ್ರಾಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೌಕ್ರಾಡಿ ಗ್ರಾಮದ ಕೊಕ್ಕಡ ಕಾಪಿನ ಬಾಗಿಲು ನಿವಾಸಿ ದಿ| ದುಗ್ಗಣ್ಣ ಗೌಡ ಎಂಬವರ ಪುತ್ರ ನೇಮಣ್ಣ ಗೌಡ (56) ಎಂದು ಗುರುತಿಸಲಾಗಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಇವರು ತನ್ನ ಅನಾರೋಗ್ಯ ಪೀಡಿತ ತಾಯಿಯೊಂದಿಗೆ ವಾಸವಾಗಿದ್ದರು. ಅವಿವಾಹಿತರಾಗಿದ್ದ ಇವರು ಸೋಮವಾರ ಸಂಜೆ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Also Read  ಬಿಳಿನೆಲೆ ಪ್ರೌಢಶಾಲೆಗೆ ಧರ್ಮಸ್ಥಳ ಯೋಜನೆಯಿಂದ ಡೆಸ್ಕ್ ಮತ್ತು ಬೆಂಚ್ ವಿತರಣೆ ಗುಣಮಟ್ಟದ ವಿದ್ಯಾರ್ಜನೆಗೆ ಪೂಜ್ಯರು ನೀಡಿದ ಡೆಸ್ಕ್ ಬೆಂಚ್ ಸಹಕಾರಿ- ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ

error: Content is protected !!
Scroll to Top