ಕಡಬ: ದೇವಸ್ಥಾನದಿಂದ‌ ಚಿನ್ನ, ಬೆಳ್ಳಿ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿನ ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದಿಂದ ಒಡವೆ ಹಾಗೂ ಸಿಸಿ ಕ್ಯಾಮೆರಾ ಕದ್ದೊಯ್ದ ಘಟನೆ ಶುಕ್ರವಾರದಂದು ಬೆಳಕಿಗೆ ಬಂದಿದೆ.

ದೇವಸ್ಥಾನದ ಅರ್ಚಕ ರವಿಪ್ರಸಾದ್‌ ಭಟ್‌ ಅವರು ಶುಕ್ರವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆಯಲು ಮುಂದಾದಾಗ ದೇವಸ್ಥಾನದ ಮುಖ್ಯ ಬಾಗಿಲಿನ ಚಿಲಕವನ್ನು ಹಾನಿ ಮಾಡಿರುವುದು ಕಂಡು ಬಂದಿತ್ತು. ಬಾಗಿಲು ಸರಿಸಿ ಪರಿಶೀಲಿಸಿದಾಗ ದೇವರ ಮೂರ್ತಿಗೆ ಹಾಕಲಾಗಿದ್ದ 35,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ದೇವಸ್ಥಾನಕ್ಕೆ ಅಳವಡಿಸಲಾಗಿದ್ದ ಅಂದಾಜು 36,000 ರೂ. ಮೌಲ್ಯದ ಸಿಸಿ ಕೆಮರಾದ ಡಿವಿಆರ್‌, ಹಾರ್ಡ್‌ಡಿಸ್ಕ್ ಹಾಗೂ ಟಿವಿ ಮಾನಿಟರ್‌ ಅನ್ನು ಕಳ್ಳರು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ರವಿಪ್ರಸಾದ್‌ ಭಟ್‌ ನೀಡಿದ ದೂರಿನಂತೆ ಕಡಬ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!

Join the Group

Join WhatsApp Group