ವದಂತಿ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆಯನೂರು ಮಂಜುನಾಥ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯಲ್ಲಿದ್ದ ಆಯನೂರ್ ಮಂಜುನಾಥ್, ಬಳಿಕ ಕಾಂಗ್ರೆಸ್ ಕದ ತಟ್ಟಿ ಕೊನೆಗೆ ಜೆಡಿಎಸ್ ಸೇರಿದ್ದರು. ಇದೀಗ ಮಾಜಿ ಸಂಸದ ಆಯನೂರು ಮಂಜುನಾಥ್‌ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.


ಪರಿಷತ್‌ ಚುನಾವಣೆಗೆ ಈಗಾಗಲೇ ಆಯನೂರು ಮಂಜುನಾಥ್ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ, ಇಂದು ಆಯನೂರು, ಡಿಸಿಎಂ ಡಿಕೆಶಿ ಅವರನ್ನು ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಅವರು ಕೆಲವು ಬಿಜೆಪಿ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆಯುವ ಸಾಧ್ಯತೆಯಿದೆ ಎಂದೆನ್ನಲಾಗಿದೆ.

Scroll to Top