ಚಂದ್ರಯಾನ-3 ಬಗ್ಗೆ ಅವಹೇಳನಕಾರಿ ಪೋಸ್ಟ್ – ನಟ ಪ್ರಕಾಶ್ ರಾಜ್ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ, ಆ. 22. ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ನಟ ಪ್ರಕಾಶ್ ರಾಜ್ ಇದೀಗ ಚಂದ್ರಯಾನ-3 ಬಗ್ಗೆ ವ್ಯಂಗ್ಯವಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಒಂದೆಡೆ ನೆಟ್ಟಿಗರು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಇನ್ನೊಂದೆಡೆ ಅವರ ವಿರುದ್ದ ಬಾಗಲಕೋಟೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆ ಮುಖಂಡ ನಂದು ಗಾಯಕವಾಡ ಮತ್ತಿತರರು ದೂರು ನೀಡಿದ್ದಾರೆ. ಪ್ರಕಾಶ್ ರಾಜ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

error: Content is protected !!

Join the Group

Join WhatsApp Group