ಇಂದು (ಆ. 29) ಶಾಲಾ ಶಿಕ್ಷಣ-ಸಾಕ್ಷರತಾ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ: ಅವರು ಆ. 29ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮೂಡಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ ಕನ್ನಡ ಭವನದಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top