ಸಮುದ್ರಪಾಲಾಗಿದ್ದ ಯುವಕರಿಬ್ಬರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaa.com ಬೈಂದೂರು. 28. ಇಲ್ಲಿನ ಶಿರೂರು ಅಳ್ವೆಗದ್ದೆ ಎಂಬಲ್ಲಿ ರವಿವಾರದಂದು ಸಂಜೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಇಂದು ಪತ್ತೆಯಾಗಿದೆ.

ದೋಣಿ ಮಗುಚಿ ಬಿದ್ದ 300 ಮೀಟರ್ ವ್ಯಾಪ್ತಿಯಲ್ಲಿ ಗಂಗೊಳ್ಳಿ ಮುಸ್ತಾಫಾ ಅವರ ಮಗ ಮುಹಮ್ಮದ್ ಮುಸಾಬ್ (22) ಹಾಗೂ ಬಾವು ನೂರುಲ್ ಅಮೀನ್ ಅವರ ಮಗ ನಝಾನ್ (24) ಅವರ ಮೃತದೇಹವು ದೊರೆತಿದೆ.

Scroll to Top