ಅಕ್ರಮ ಮರ ಸಾಗಾಟ – ಲಕ್ಷಾಂತರ ರೂ. ಮೌಲ್ಯದ ಮರ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 30. ಅಕ್ರಮವಾಗಿ ಮರ ಸಾಗಾಟದ ವೇಳೆ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಅರಣ್ಯ ಇಲಾಖಾಧಿಕಾರಿಗಳು ಆರೋಪಿ ಸಹಿತ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಬಂಟ್ವಾಳ ಮೂಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಬಿಸಿ ರೋಡ್ ಜಂಕ್ಷನ್ ಬಳಿ ನಡೆದಿದೆ.

ವಾಹನ ಮತ್ತು ಅಮಾನತು ಪಡಿಸಿದ ಸೊತ್ತಿನ ಮೌಲ್ಯ ಒಟ್ಟು 7 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣದಲ್ಲಿ ಬಂಟ್ವಾಳ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ, ಉಪವಲಯ ಅರಣ್ಯಾಧಿಕಾರಿ ಪ್ರೀತಮ್ ಎಸ್, ಯಶೋಧರ, ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ, ದಯಾನಂದ, ಶೋಭಿತ್ ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Also Read  ಬೇಟಿ ಬಚಾವೊ - ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ►ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ  ಸೂಚನೆ

error: Content is protected !!
Scroll to Top