ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 30. ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.


ಗಾಯಗೊಂಡ ಆಟೋ ಚಾಲಕನನ್ನು ಮಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಸಾದಿಕ್ ತನ್ನ ಆಟೋ ರಿಕ್ಷಾದಲ್ಲಿ ಸುರಕ್ಷಾ ಅಧಿಕಾರಿಯೋರ್ವರನ್ನು ಗೂಡಿನಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಪಾಣೆಮಂಗಳೂರು ಕಡೆಯಿಂದ ಬಂದ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ, ರಿಕ್ಷಾ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಪ್ರಯಾಣಿಕರೊಬ್ಬರು ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿ ಕಾರು ಚಾಲಕನ ವಿರುದ್ದ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಉಡುಪಿ: ಸುಸ್ಥಿತಿಯಲ್ಲಿದ್ದ ರಸ್ತೆಗೆ ಮತ್ತೆ ಕಾಂಕ್ರೀಟ್ ಕಾಮಗಾರಿ.!

error: Content is protected !!