ಕಡಬ: ಕಾರು – ಮಿನಿ ಬಸ್ ನಡುವೆ ಅಪಘಾತ – ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಮಿನಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೇಪು ದೇವಸ್ಥಾನದ ಸಮೀಪ ಬುಧವಾರದಂದು ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಮಿನಿ ಬಸ್ ನಡುವೆ ಮೀನಾಡಿ ಸಮೀಪದ ಕೇಪು ದೇವಸ್ಥಾನದ ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕೋಲಾರ ಮೂಲದ ನಾಲ್ವರು ಗಾಯಗೊಂಡಿದ್ದು, ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ಸಾಲಬಾಧೆ- ರೈತ ಆತ್ಮಹತ್ಯೆ

error: Content is protected !!
Scroll to Top