ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ- ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು



(ನ್ಯೂಸ್ ಕಡಬ) newskadaba.com ಚಾರ್ಮಾಡಿ, ಸೆ. 16. ಮಳೆಯಿಂದಾಗಿ ಮಂಜು ಆವರಿಸಿಕೊಂಡಿದ್ದ ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನಡೆದಿದೆ.







ನೀರಿನ ಬಾಟಲ್ ಗಳನ್ನು ತುಂಬಿದ್ದ ಲಾರಿ ಶುಕ್ರವಾರದಂದು ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ವೇಳೆ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ದಾರಿ ಕಾಣದೇ ರಸ್ತೆ ತಡೆಗೋಡೆಗೆ ಢಿಕ್ಕಿ ಹೊಡೆದು 100 ಅಡಿ ಪ್ರಪಾತಕ್ಕೆ ಬಿದ್ದಿದೆ. ಈ ವೇಳೆ ಅಲ್ಲೇ ಇದ್ದ ದೈತ್ಯ ಮರಕ್ಕೆ ಲಾರಿ ಸಿಲುಕಿಕೊಂಡ ಪರಿಣಾಮ ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top