ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರದಂದು ನಡೆದಿದೆ.

ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ. 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಸಿಬ್ಬಂದಿಯೂ ಆಗಿದ್ದರು.

Also Read  ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ

error: Content is protected !!
Scroll to Top