ವಿಹಾರಕ್ಕೆಂದು ಬಂದಿದ್ದ ಯುವಕ ಸಮುದ್ರ ಪಾಲು- ಇಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಇಲ್ಲಿನ ಮಲ್ಲಮಾರ್‌ ಬೀಚ್ ಗೆ ವಿಹಾರಕ್ಕೆಂದು ಬಂದಿದ್ದ ಮೂವರ ಪೈಕಿ ಒರ್ವ ಸಮುದ್ರಪಾಲಾಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರದಂದು ಸಂಜೆ ನಡೆದಿದೆ.

ಸಮುದ್ರಪಾಲಾದ ವ್ಯಕ್ತಿಯನ್ನು ಬಾಗಲಕೋಟೆ ನಿವಾಸಿ ಮಹಂತೇಶ್‌(29) ಎಂದು ಗುರುತಿಸಲಾಗಿದೆ. ಈತ ಅಕ್ಕ ಸಾವಿತ್ರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಸ್ನೇಹಿತರ ಜೊತೆಗೆ ವಿಹಾರಕ್ಕೆ ಬಂದಿದ್ದ ಎನ್ನಲಾಗಿದೆ. ಮಹಂತೇಶ್‌ ನನ್ನು ರಕ್ಷಿಸಿ ಹಿಂದೆ ಎಳೆದು ತರುತ್ತಿದ್ದಾಗ ಮತ್ತೆ ಅಲೆಯ ಹೊಡೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದಾನೆ. ಈ ಕುರಿತು ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪಟ್ರಮೆ: ದಾಖಲೆಯಲ್ಲಿದ್ದ ತೋಡನ್ನು ತಿರುಗಿಸಿ ಕೃಷಿಗೆ ಹಾನಿ ► ಕುಸಿಯುವ ಭೀತಿಯಲ್ಲಿ ಮನೆಯ ಕೊಟ್ಟಿಗೆ - ಕಂದಾಯ ಇಲಾಖೆಯಿಂದ ನಿರ್ಲಕ್ಷ್ಯ

error: Content is protected !!
Scroll to Top