ಬಿಎಂಟಿಸಿ ಬಸ್ ಢಿಕ್ಕಿ- ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಮೃತಪಟ್ಟ ಘಟನೆ ಯಶವಂತಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್​ ಅಪಘಾತದಲ್ಲಿ ಮೂರನೇ ಬಲಿ ಇದಾಗಿದೆ.


ಮೃತ ವಿದ್ಯಾರ್ಥಿಯನ್ನು ಗಂಗಾಧರ್ (21) ಎಂದು ಗುರುತಿಸಲಾಗಿದೆ. ಈತ ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಹೂವಿನ ಮಾರ್ಕೆಟ್ ಸಮೀಪ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನಾ ಸಂಬಂಧ ಸ್ಥಳಕ್ಕಾಗಮಿಸಿದ ಯಶವಂತಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Also Read  ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ➤ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಗಳಿಗೆ ದಾಖಲಾತಿಗೆ ಅರ್ಜಿ ಆಹ್ವಾನ

error: Content is protected !!
Scroll to Top