ಪಂಜಾಬ್- ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ರವರು ಬುಧವಾರದಂದು ಪಂಜಾಬ್ ವಿಧಾನಸಭೆ ಸಭಾಧ್ಯಕ್ಷ ಸರ್ದಾರ್ ಕುಳ್ತಾರ್ ಸಿಂಘ್ ಸಂದ್ವನ್ ಅವರನ್ನು ಭೇಟಿಯಾಗಿ ಚರ್ಚಿಸಿ ಅಗತ್ಯ ಮಾಹಿತಿ ಪಡೆದರು.

ಪಂಜಾಬ್ ವಿಧಾನ ಸಭೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಕೂಡ ಚರ್ಚಿಸಿದರು. ಈ ಸಂದರ್ಭದಲ್ಲಿ ಪಂಜಾಬ್ ವಿಧಾನ ಸಭೆಯ ಕಾರ್ಯದರ್ಶಿ ರಮ್ಲೋಕ್, ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಮತ್ತು ವಿಧಾನ ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Scroll to Top