ದೇವಸ್ಥಾನದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 16. ದೇವಸ್ಥಾನದ ಕೆರೆಯೊಂದರಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ಎಂಲ್ಲಿಂದ ವರದಿಯಾಗಿದೆ.

ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್  (26) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ರಾತ್ರಿ 12 ಗಂಟೆ ವೇಳೆಗೆ ದೇವಸ್ಥಾನದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಪತ್ತೆಯಾದ ಹಿನ್ನೆಲೆ ಈತ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಪು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ರಸ್ತೆ ಅಪಘಾತ- ಸಾಫ್ಟ್ ವೇರ್ ಇಂಜಿನಿಯರ್ ಬಲಿ

error: Content is protected !!
Scroll to Top