ನಿರುದ್ಯೋಗ- ಯುವಕನಿಂದ ಆತ್ಮಹತ್ಯೆಗೆ ಯತ್ನ – ಸ್ಥಳೀಯರಿಂದ ರಕ್ಷಣೆ

(ನ್ಯೂಸ್‌ ಕಡಬ) newskadaba.com ಬಂಟ್ವಾಳ, ಫೆ. 19. ನಿರುದ್ಯೋಗಿ ಯುವಕನೋರ್ವ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದುದನ್ನು ಗಮನಿಸಿದ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪುತ್ತೂರಿನ ನಿಶ್ಚಿತ್ (25) ಎಂದು ಗುರುತಿಸಲಾಗಿದೆ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ಯುವಕರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯಿಂದ ಪಾರು ಮಾಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Also Read  ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

error: Content is protected !!
Scroll to Top