ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ದರ್ಬೆ ಬೈಪಾಸ್ ವೃತ್ತದ ಬಳಿ ನಡೆದಿದೆ.

ಗಾಯಗೊಂಡ ಸ್ಕೂಟರ್ ಸವಾರನನ್ನು ನೆಲ್ಲಿಕಟ್ಟೆ ಚಿಕ್ಕಪುತ್ತೂರು ನಿವಾಸಿ ದಿವಾಕರ ಮಡಿವಾಳ ಎಂದು ಗುರುತಿಸಲಾಗಿದೆ. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದಿವಾಕರ ಅವರು ಗಂಭೀರ ಗಾಯಗೊಂಡಿದ್ದರು. ಈ ಸಂದರ್ಭ ಅದೇ ದಾರಿಯಾಗಿ ಹೋಗುತ್ತಿದ್ದ ಅರುಣ್ ಕುಮಾರ್ ಪುತ್ತಿಲರವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ

 

error: Content is protected !!
Scroll to Top