ಕೈಯಲ್ಲೇ ಸಿಡಿದ ಪಟಾಕಿ- ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 21. ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಕನಕಮಜಲಿನಲ್ಲಿ ಸಂಭವಿಸಿದೆ.

ಗಾಯಗೊಂಡವರನ್ನು ಗಬ್ಬಲಡ್ಕದ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಏಕಾಹ ಭಜನೆ ನಡೆಯುತ್ತಿದ್ದ ವೇಳೆ ಚಂದ್ರಶೇಖರ ಅವರು ಪಟಾಕಿಯನ್ನು ಸಿಡಿಸುವ ವೇಳೆ ಪಟಾಕಿ ಕೈಯಲ್ಲೇ ಸ್ಫೋಟಗೊಂಡ ಪರಿಣಾಮ ಕೈ ಬೆರಳುಗಳಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಅವರನ್ನು ಸ್ಥಳೀಯರು ಸೇರಿ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

Also Read  ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ ➤ ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್

error: Content is protected !!
Scroll to Top