ನೆಟ್ಟಣ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.13. ಕೂಲಿ‌ಕೆಲಸದ ನಿಮಿತ್ತ ಜಿಲ್ಲೆಗೆ ಆಗಮಿಸಿ ಟೆಂಟ್ ಹಾಕಿ ವಾಸ್ತವ್ಯವಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ನೆಟ್ಟಣದಲ್ಲಿ ಮಂಗಳವಾರದಂದು ನಡೆದಿದೆ.

ಮೃತರನ್ನು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಳಗೂಡು ಹೋಬಳಿ ನಿವಾಸಿ ಮನೋಹರ್(80) ಎಂದು ಗುರುತಿಸಲಾಗಿದೆ. ಇವರು ತನ್ನ ಕುಟುಂಬಿಕರೊಂದಿಗೆ ನೆಟ್ಟಣದಲ್ಲಿ ಟೆಂಟ್ ಹಾಕಿ ವಾಸ್ತವ್ಯದಲ್ಲಿದ್ದು, ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ. ಮಂಗಳವಾರದಂದು ಕುಸಿದು ಬಿದ್ದ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕೇರಳದಲ್ಲಿ ಹರತಾಳ

error: Content is protected !!