ವಜ್ರದ ಕರಿಮಣಿ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ ಹಾಗೂ ನಿರ್ವಾಹಕ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 23. ಬಸ್‌ನಲ್ಲಿ ಕಳೆದುಹೋಗಿದ್ದ ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯೊಂದನ್ನು ಅದರ ಮಾಲಕರಿಗೆ ಮರಳಿ ನೀಡುವ ಮೂಲಕ ಬಸ್ ಚಾಲಕ ಪುರಂದರ ಹಾಗೂ ನಿರ್ವಾಹಕ ಆಸಿಫ್ ಎಂಬವರು ಪ್ರಾಮಾಣಿಕತೆ ಮೆರೆದಿದ್ದಾರೆ.

ಮಣಿಪಾಲದಿಂದ ಮಂಗಳೂರಿಗೆ ತೆರಳುವ ರೇಷ್ಮಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಸುಮಾರು ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯೊಂದು ಪತ್ತೆಯಾಗಿದ್ದು, ಅದನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

Scroll to Top