ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ. 21. ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ- ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ನಡೆದಿದೆ.


ಗಾಯಗೊಂಡವರನ್ನು ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಪರಿಣಾಮ ಕಾರು ಜಖಂಗೊಂಡಿದ್ದು, ಘಟನೆಯಿಂದಾಗಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮರವು ವಿದ್ಯುತ್ ಕಂಬದ ಮೇಲೆ ಬಿದ್ದು ಕಂಬ ಮುರಿದು ಬಿದ್ದಿದೆ. ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಸಂಚಾರಕ್ಕೆ ಅಡಚಣೆಯಾಗಿದ್ದ ಮರವನ್ನು ತೆರವುಮಾಡಿದ್ದಾರೆ ಎನ್‌ನಲಾಗಿದೆ.

Also Read  ಕುಕ್ಕೇ ಸುಬ್ರಹ್ಮಣ್ಯ ವಿಶೇಷ ಶಿವರಾತ್ರಿ ಆಚರಣೆಗೆ ಹೈಕೋರ್ಟ್ ತಡೆಯಾಜ್ಞೆ

error: Content is protected !!
Scroll to Top