ಕಡಬ: ಪ್ರತ್ಯೇಕ ಪ್ರಕರಣ – ಮನನೊಂದು ಇಬ್ಬರು ಆತ್ಮಹತ್ಯೆ

ಕಡಬ, ಮೇ.21. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ನೂಜಿಬಾಳ್ತಿಲ ಗ್ರಾಮದ ಗೋಪಾಲಕೃಷ್ಣ ಗೌಡ (70) ಎಂದು ಗುರುತಿಸಲಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಸೋಮವಾರದಂದು ತನ್ನ ಮನೆ ಸಮೀಪದ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್ಥಿಕ ಸಮಸ್ಯೆ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ಸೋಮವಾರದಂದು ನಡೆದಿದೆ.

Also Read  ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಗರ್ಭಿಣಿ

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೋಡಿಂಬಾಳ ಗ್ರಾಮದ ಅರ್ಪಾಜೆ ನಿವಾಸಿ ದಯಾನಂದ ರೈ(56) ಎಂದು ಗುರುತಿಸಲಾಗಿದೆ. ಸಾಲದ ಸುಳಿಯಲ್ಲಿ ಸಿಲುಕಿದ್ದ ಇವರು ಮಾನಸಿಕ ಖಿನ್ನತೆಗೆ ಒಳಗಾಗಿ ಸೋಮವಾರದಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top