ದ್ವಿ ಚಕ್ರ ವಾಹನಕ್ಕೆ ನಾಯಿಯ ಶವ ಕಟ್ಟಿ ಎಳೆದುಕೊಂಡು ಹೋದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಉಡುಪಿ, ಜು.20. ದ್ವಿಚಕ್ರ ವಾಹನದಲ್ಲಿ ನಾಯಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಸಾರ್ವಜನಿಕರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಈ ವ್ಯಕ್ತಿ ನಾಯಿಯ ಕುತ್ತಿಗೆಗೆ ಸರಪಳಿಯನ್ನು ಜೋಡಿಸಿ ನಂತರ ತನ್ನ ಸ್ಕೂಟರ್‌ ನ ಸೀಟಿಗೆ ಇನ್ನೊಂದು ತುದಿಯನ್ನು ಕಟ್ಟಿದ್ದಾನೆ. ವ್ಯಕ್ತಿಗಾಗಿ ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಾರ್ವಜನಿಕರು ಕ್ರೂರ ಕೃತ್ಯವನ್ನು ಖಂಡಿಸಿದ್ದು ಮುಂದೆ ಇಂತಹ ಘಟನೆಗಳು ನಡೆಯದಂತೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

error: Content is protected !!

Join the Group

Join WhatsApp Group