ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ

(ನ್ಯೂಸ್ ಕಡಬ)newskadaba.com. ಉಡುಪಿ, ಜು.24. ಮತ್ಸ್ಯಗಂಧ ಎಕ್ಸ್ ಪ್ರೆಸ್ ನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದ್ದು, ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನಗದು ಬಹುಮಾನ ನೀಡಿ ಪ್ರಶಂಸೆ ವ್ಯಕ್ತಪಡಿಸಲಾಯಿತು.


ದೊಡ್ಡ ಅನಾಹುತವನ್ನು ತಪ್ಪಿಸಿ, ಸಮಯಪ್ರಜ್ಞೆಯಿಂದ ನಿರ್ಣಾಯಕ ಕ್ರಮವನ್ನು ಕೈಗೊಂಡಿರುವ ಸಿಬ್ಬಂದಿಯನ್ನು ಗುರುತಿಸಿ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ನ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನೀಡಿದರು. ಬಾರ್ಕೂರು-ಉಡುಪಿ ವಿಭಾಗದ ನಡುವೆ ಬರುತ್ತಿದ್ದಾಗ ಲೊಕೊ ಪೈಲಟ್ ಮತ್ತು ಸಹಾಯಕ ಲೊಕೊ ಪೈಲಟ್ ಟ್ರ್ಯಾ್ಕ್‌ ಗೆ ಅಡ್ಡಲಾಗಿ ಬಿದ್ದಿದ್ದ ದೊಡ್ಡ ಮರವನ್ನು ಗಮನಿಸಿದರು. ಈ ವೇಳೆ ತುರ್ತು ಬ್ರೇಕ್ ಹಾಕಿ ರೈಲನ್ನು ಯಾವುದೇ ತೊಂದರೆಗಳಿಲ್ಲದೆ ಯಶಸ್ವಿಯಾಗಿ ನಿಲ್ಲಿಸಿದ್ದಾರೆ. ಒಹೆಚ್‌ಇ ತಂಡವು ಟ್ರ್ಯಾ ಕ್‌ ಮೇಲೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದ ಬಳಿಕ ರೈಲು ತನ್ನ ಪ್ರಯಾಣವನ್ನು ಬೆಳೆಸಿತು ಎನ್ನಲಾಗಿದೆ.

error: Content is protected !!

Join the Group

Join WhatsApp Group