‘ಪ್ರಕೃತಿ ವಿಕೋಪದ ಬಗ್ಗೆ ಈ ಮೊದಲೇ ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು’ ಕೇಂದ್ರ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಪ್ರಾಕೃತಿಕ ವಿಕೋಪ ಸಂಭವಿಸುವ ಬಗ್ಗೆ ಕೇರಳ ಸರ್ಕಾರಕ್ಕೆ ಈ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಎನ್‌ಡಿಆರ್‌ಎಫ್ ತಂಡಗಳು ಕೇರಳಕ್ಕೆ ತೆರಳಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.


ಕೇಂದ್ರ ಸರ್ಕಾರದ ಮುನ್ನೆಚ್ಚರಿಕೆ ವ್ಯವಸ್ಥೆ ಮತ್ತು ದುರಂತದ ಪ್ರತಿಕ್ರಿಯೆ ಬಗ್ಗೆ ವಿಪಕ್ಷಗಳು ಟೀಕಿಸಿದ ಹಿನ್ನೆಲೆ, ರಾಜ್ಯ ಸಭೆಯಲ್ಲಿ ಉತ್ತರಿಸಿದ ಅವರು, ಮುಂಚಿತವಾಗಿ ನೀಡಿದ್ದ ಎಚ್ಚರಿಕೆಗೆ ಕೇರಳ ಸರ್ಕಾರ ಕಿವಿಗೊಡಲಿಲ್ಲ. ಕೊನೆ ಪಕ್ಷ ಎನ್‌ಡಿಆರ್‌ಎಫ್ ತಂಡಗಳು ರಾಜ್ಯಕ್ಕೆ ಬಂದಿರುವುದು ಗೊತ್ತಾದರೂ ಎಚ್ಚೆತ್ತುಕೊಳ್ಳಲಿಲ್ಲ. ಈಗ ದುರಂತ ನಡೆದು ಹೋಗಿದೆ. ನರೇಂದ್ರ ಮೋದಿ ಸರ್ಕಾರ ಕೇರಳ ಸರ್ಕಾರದೊಂದಿಗೆ ಬಂಡೆಯಂತೆ ಗಟ್ಟಿಯಾಗಿ ನಿಲ್ಲಲಿದೆ. ಕೇಂದ್ರದಿಂದ ಎಲ್ಲಾ ರೀತಿಯ ನೆರವನ್ನು ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದರು.

error: Content is protected !!

Join the Group

Join WhatsApp Group